ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಬಂಟ್ವಾಳ : ಯವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ, ಲಿಂಗಪ್ಪ ಪೂಜಾರಿ ಎಂಬವರ ಪುತ್ರಿ ತುಳಸಿ (30) ಆತ್ಮಹತ್ಯೆ ಮಾಡಿಕೊಂಡವರು.
ಸೋಮವಾರ ಮುಂಜಾನೆ ತುಳಸಿ ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಬರಿಮಾರು ಗ್ರಾಮದ ಪಾಪೆತ್ತಿಮಾರು ಕಡವಿ ಬಳಿಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಎಸ್ಸೈ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story