ಉಡುಪಿ, ಅ.16: ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಧನ್ವಂತರಿ ಚಿಕಿತ್ಸಾಲಯ ಹಾಗೂ ಲಯನ್ಸ್ ಕ್ಲಬ್ ಕಲ್ಯಾಣಪುರ ಅ.20ರ ಬೆಳಗ್ಗೆ 8:30ರಿಂದ ಅಪರಾಹ್ನ 12:30ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉಚಿತ ಆರೋಗ್ಯ, ಮೂಳೆ ಸಾಂದ್ರತೆ ಹಾಗೂ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿದೆ ಎಂದು ಪ್ರಕಟಣೆ ತಿಳಿಸಿದೆ.