ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ: ಪೂರ್ಣಿಮಾ ಜನಾರ್ದನ್ಗೆ ಕಂಚಿನ ಪದಕ
ಉಡುಪಿ, ಅ.18: ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ ‘ಕರ್ನಾಪೆಕ್ಸ್-2019’ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ಸಂಪಾದಿಸಿದ ಕನ್ನಡ ಹಾಗೂ ಆಂಗ್ಲ ಅಕ್ಷರಮಾಲೆ ಮತ್ತು ಗಾದೆ ಮಾತುಗಳ ಶೀರ್ಷಿಕೆಯ ಅಂಚೆ ಚೀಟಿ ಪ್ರದರ್ಶನ ಕಂಚಿನ ಪದಕದ ಪುರಸ್ಕಾರವನ್ನು ಪಡೆದುಕೊಂಡಿದೆ.
ಈ ಸಂದರ್ಭದಲ್ಲಿ ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾರ್ಲ್ಸ್ ಲೋಬೊ, ಉತ್ತರ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ವೀಣಾ ಶ್ರೀನಿವಾಸ್, ಬೆಂಗಳೂರು ವಲಯ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಅರವಿಂದ ವರ್ಮ, ದಕ್ಷಿಣ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್, ಜ್ಯೂರಿ ಅಧ್ಯಕ್ಷ ಅಶೋಕ್ ಕುಮಾರ್ ಬಾಯನ್ವಾಲ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಸ್.ಎಡಪಡಿತ್ತಾಯ ಉಪಸ್ಥಿತರಿದ್ದರು.
Next Story