ಮಣಿಪಾಲ: ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ಸೌಲಭ್ಯ
ಉಡುಪಿ, ಅ.18: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗ, ಮಣಿಪಾಲ ಪ್ರಧಾನ ಅಂಚೆಕಚೇರಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಆಧಾರ ನೊಂದಣಿ ಮತ್ತು ತಿದ್ದುಪಡಿ ಜೊತೆಗೆ ಅಂಚೆ ಯೋಜನೆಗಳಾದ ಸುಕನ್ಯ ಸಮೃದ್ಧಿ ಯೋಜನೆ, ಸಾರ್ವಜನಿಕ ವಿಷ್ಯ ನಿಧಿ, ಸಣ್ಣ ಉಳಿತಾಯ ಖಾತೆ ಯೋಜನೆಗಳು, ಅಂಚೆ ಜೀವವಿಮೆ ಮತ್ತು ಗ್ರಾಮೀಣ ಅಂಚೆ ಜೀವವಿಮೆ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್, ಅಂಚೆ ಸಂಗ್ರಹಣಾ ಖಾತೆಗಳನ್ನು ತೆರೆಯಲು ವಿಶೇಷ ಕೌಂಟರ್ಗಳನ್ನು ಅ.19ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ತೆರೆಯಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ:0820-2570032/2571364ನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ: ಕುಂದಾಪುರ ಪ್ರಧಾನ ಅಂಚೆ ಕಚೇರಿಯಲ್ಲೂ ಸಾರ್ವಜನಿಕರ ಅನುಕೂಲಕ್ಕಾಗಿ ಆಧಾರ ನೊಂದಣಿ ಮತ್ತು ತಿದ್ದುಪಡಿಯ ಜೊತೆಗೆ ಅಂಚೆ ಯೋಜನೆಗಳಿಗಾಗಿ ವಿಶೇಷ ಕೌಂಟರ್ಗಳನ್ನು ಅ.20ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತೆರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08254-230337/231271ನ್ನು ಸಂಪರ್ಕಿಸುವಂತೆಉಡುಪಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.