ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಕ್ರಮ: ಶಾಸಕ ವೇದವ್ಯಾಸ್ ಕಾಮತ್
ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2019 ಉದ್ಘಾಟನೆ
ಮಂಗಳೂರು, ಅ.19: ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ 3.5 ಕೋ.ರೂ. ಅನುದಾನ ಬರಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ದ.ಕ.ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭಗೊಂಡ ದ.ಕ. ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2019 ಉದ್ಘಾಟಿಸಿ ಅವರು ಮಾತನಾಡಿದರು.
ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಮಂಗಳೂರು ಸ್ಮಾಟ್ ಸಿಟಿಯಿಂದ 10 ಕೊ.ರೂ. ಬಿಡುಗಡೆ ಆಗಿದೆ. ಕ್ರೀಡಾಳುಗಳು ಸತತ ಪರಿಶ್ರಮ, ಛಲದಿಂದ ಯಶಸ್ಸುಗಳಿಸಲು ಸಾಧ್ಯ ಎಂದು ಕಾಮತ್ ಹೇಳಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥ ನಂಜುಡಪ್ಪತಿಮ್ಮಯ್ಯ, ಕಸ್ಟಮ್ಸ್ ನಿವೃತ್ತ ಸಹಾಯಕ ಆಯುಕ್ತ ರೋಹಿತ್ ಹೆಗ್ಡೆ, ಉದ್ಯಮಿಗಳಾದ ಜೀತೇಂದ್ರ ಕೊಟ್ಟಾರಿ, ಸಂಪತ್ ಶೆಟ್ಟಿ, ದ.ಕ. ಜಿಲ್ಲಾ ಅಥ್ಲೆಟಿಕ್ಸೃ್ ಅಸೋಸಿಯೇಶನ್ ಕಾರ್ಯದರ್ಶಿ ತಾರಾನಾಥ್ ಶೆಟ್ಟಿ, ಕೋಶಾಧಿಕಾರಿ ಕೃಷ್ಣ, ಸಲಹೆಗಾರ ಸುನಿಲ್ ಶೆಟ್ಟಿ ಉಪಸ್ಥಿತರಿದ್ದರು. ರೀಟಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.