ಪ್ರಕೃತಿ ವಿಕೋಪ: ಸಂತ್ರಸ್ತರಿಗೆ ಚೆಕ್ ವಿತರಣೆ
ಮಂಗಳೂರು, ಅ.20: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಪರಿಹಾರದ ಚೆಕ್ಕನ್ನು ಪದವು ಗ್ರಾಮಕರಣಿಕರ ಕಚೇರಿಯಲ್ಲಿ ಶನಿವಾರ ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಪ್ರಕೃತಿ ವಿಕೇಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಧನ ನೀಡುವುದು ಸರಕಾರದ ಜವಾಬ್ದಾರಿಯಾಗಿದೆ. ಮಳೆಹಾನಿಯಿಂದ ನಗರ ಪ್ರದೇಶದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಪೂರ್ಣ ಪ್ರಮಾಣದ ಹಾನಿಯಾದ ಕಡೆಗೆ ಹಿಂದೆಂದಿಗಿಂತಲೂ ಹೆಚ್ಚಿನ ಮೊತ್ತವನ್ನು ಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರೂಪಾ ಡಿ. ಬಂಗೇರ, ರಾಮಚಂದ್ರ ಚೌಟ, ಕಿಶೋರ್ ಕೊಟ್ಟಾರಿ ಮತ್ತಿತರರು ಪಾಲ್ಗೊಂಡಿದ್ದರು.
Next Story