ಉಡುಪಿ: ಅ.24ರಂದು ಸಂಕಲ್ಪ ಯಾತ್ರೆ
ಉಡುಪಿ, ಅ.23: ಮಹಾತ್ಮಗಾಂಧಿಯವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಕೇಂದ್ರ ಸರಕಾರದ ನಿರ್ದೇಶನದಂತೆ ದೇಶಾದ್ಯಂತ ನಡೆಯುತ್ತಿರುವ ‘ಗಾಂಧಿ ಸಂಕಲ್ಪ ಯಾತ್ರೆ’ಯು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರ ನೇತೃತ್ವದಲ್ಲಿ ಅ.24ರ ಗುರುವಾರ ನಡೆಯಲಿದೆ.
ನಾಳೆ ಬೆಳಗ್ಗೆ 9:30ಕ್ಕೆ ನಗರದ ಅಜ್ಜರಕಾಡಿನ ಭುಜಂಗ ಪಾರ್ಕಿನಲ್ಲಿರುವ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರೊಂದಿಗೆ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಗುವುದು. ಈ ಬೃಹತ್ ಯಾತ್ರೆಯಲ್ಲಿ ಉಡುಪಿ ನಗರ ಶಾಲಾ-ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಬೆಳಗ್ಗೆ 9:30ಕ್ಕೆ ಭುಜಂಗ ಪಾರ್ಕಿನಲ್ಲಿ ಪ್ರಾರಂಭಗೊಳ್ಳುವ ಯಾತ್ರೆಯು ಜೋಡುಕಟ್ಟೆ, ಕೆ.ಎಂ.ಮಾರ್ಗ, ಸರ್ವಿಸ್ ಬಸ್ನಿಲ್ದಾಣ, ಗಾಂಧಿ ಪ್ರತಿಮೆ, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಸಾಗಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
Next Story