ಡಿಕೆಶಿಗೆ ಜಾಮೀನು: ಉಡುಪಿ ಕಾಂಗ್ರೆಸ್ನಿಂದ ಸಂಭ್ರಮಾಚರಣೆ
ಉಡುಪಿ, ಅ.23: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ದಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಸಂಜೆ ನಗರದ ತ್ರಿವೇಣಿ ಸರ್ಕಲ್ ಬಳಿ ಸಂಭ್ರಮಾಚರಣೆ ನಡೆಸಲಾಯಿತು.
ಡಿ.ಕೆ.ಶಿವಕುಮಾರ್ ಪರ ಜೈಕಾರ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲ ಕಾಂಗ್ರೆಸ್ ಮುಖಂಡ ರಾದ ದಿನೇಶ್ ಪುತ್ರನ್, ನರಸಿಂಹಮೂರ್ತಿ, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಗಣೇಶ್ ನೆರ್ಗಿ, ಸುರೇಶ್ ಕುಂದರ್, ಗಣೇಶ್ರಾಜ್ ಸರಳಬೆಟ್ಟು, ರಮೇಶ್ ಕಾಂಚನ್, ವಿಜಯ ಬೈಲೂರು, ಯತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Next Story