ಕಾರವಾರ: ಕೆಎಸ್ಸಾರ್ಟಿಸಿ ಬಸ್ - ಬೈಕ್ ನಡುವೆ ಅಪಘಾತ; ಬೈಕ್ ಸವಾರರಿಬ್ಬರು ಮೃತ್ಯು
ಕಾರವಾರ, ಅ.30: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಅಮದಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಕಾರವಾರ ಮೂಲದವರಾದ ರಾಜೇಶ್ ಹಾಗೂ ನಾಗೇಂದ್ರ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story