ನ.1: ಉಡುಪಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಉಡುಪಿ, ಅ.31: ರಾಜ್ಯದ ಗೃಹ ಹಾಗೂ ಸಹಕಾರ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ನ.1ರಂದು(ನಾಳೆ) ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಬೆಳಗ್ಗೆ 8:00ಕ್ಕೆ ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಯುವ ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಿ, 9:00ಕ್ಕೆ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
11:00ಗಂಟೆಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ಉದ್ಘಾಟಿಸುವ ಅವರು ಬಳಿಕ ಸಾರ್ವಜನಿಕರನ್ನು ಭೆೀಟಿ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ.
ಅಪರಾಹ್ನ 2:30ಕ್ಕೆ ಬೈಂದೂರಿನಲ್ಲಿ ಪೊಲೀಸ್ ವಸತಿ ನಿಗಮದಲ್ಲಿ ಪೊಲೀಸ್ ವೃತ್ತ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ರಸ್ತೆ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುವರು.