ಸುಳ್ಯ: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಸುಳ್ಯ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ಎಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು, ಅಧಿಕೃತ ಪ್ರಾಯೋಜಕರು ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಪೆರಾಜೆ ಶಾಲಾ ವಠಾರದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಧರಣೀದರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕ್ ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಶಿಬಿರ ಉದ್ಘಾಟಿಸಿದರು.
ರಕ್ತದಾನಿ ಸುಧಾಕರ್ ರೈ ರಕ್ತ ದಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಸ್ವಾಗತ ಮಾಡಿದರು. ವೇದಿಕೆಯಲ್ಲಿ ಯೂಸುಫ್ ಬಯಂಬು, ಸುಳ್ಯ ತಾಲೂಕು ಅಧ್ಯಕ್ಷ ಕಲಂದರ್ ಎಲಿಮಲೆ, ಸೂರಜ್ ಹೊಸೂರು, ಜಯಲಕ್ಷ್ಮಿ, ಗ್ರಾಮ ಪಂಚಾಯತ್ ಸದಸ್ಯ ಡಿ.ಬಿ ಪ್ರಕಾಶ್, ರಹೀಂ ಫ್ಯಾನ್ಸಿ, ಪೈಝಲ್ ಮಂಚಿ, ಸತೀಸ್ ಹೊದ್ದೆಟ್ಟಿ, ನೌಫಲ್, ಪೈಸಲ್ ಉಪಸ್ಥಿತರಿದ್ದರು.
ದಾನಿಗಳಿಂದ ರಕ್ತ ಸಂಗ್ರಹ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು. ಅಶ್ರಫ್ ಅರಬಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.