ನ.7, 9ರಂದು ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ
ಕಾಪು, ನ.5: ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ವತಿ ಯಿಂದ ಸಂಪದ-2019 ತಿಂಗಳ ಸಡಗರ ಕಾರ್ಯಕ್ರಮವನ್ನು ಮೂಡುಬೆಳ್ಳೆ ಸಮೀಪದ ನೆಲ್ಲಿಕಟ್ಟೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ನ.7ರಂದು ಅಪರಾಹ್ನ 2 ಗಂಟೆಗೆ ಆಯೋಜಿಸಲಾಗಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಪ್ರಜ್ಞಾ ಮಾರ್ಪಳ್ಳಿ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಲಿರುವರು.
ನ.9ರಂದು ಅಪರಾಹ್ನ 2ಗಂಟೆಗೆ ಪಡುಬಿದ್ರೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಉಡುಪಿ ಕಸಾಪ ಗೌರವ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿರುವರು ಎಂದು ಎಂದು ಕಾಪು ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿಗಳಾದ ವಿದ್ಯಾಧರ್ ಪುರಾಣಿಕ್, ವಿದ್ಯಾ ಅಮ್ಮಣ್ಣಾಯ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.
Next Story