ಇಬ್ಬರು ವಿದ್ಯಾರ್ಥಿಗಳು ನಾಪತ್ತೆ
ಕುಂದಾಪುರ, ನ.5: ಶಾಲೆಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿ ರುವ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನ.4ರಂದು ನಡೆದಿದೆ.
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಭಾಸ್ಕರ ಪೂಜಾರಿ ಎಂಬವರ ಮಗ ಪ್ರಜ್ವಲ್(15) ಎಂಬಾತ ಮಾವಿನಕಟ್ಟೆಯ ಮೂಕಾಂಬಿಕಾ ಹೈಸ್ಕೂಲಿನಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ಈತ ಬೆಳಗ್ಗೆ ಮನೆಯಿಂದ ಶಾಲೆಗೆ ಹೋದವನು ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ಹಾಗೂ ಅದೇ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ರತನ್ ಎಂಬವರನ್ನು ಬೆಳಗ್ಗೆ ಕುಂದಾಪುರ ಹೊಸ ಬಸ್ ನಿಲ್ದಾಣ ದಲ್ಲಿ ಕೆಲವರು ನೋಡಿರುವುದಾಗಿ ಹೇಳಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story