ಉದ್ಯಾವರ: ನ.16ರಂದು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಸಾಮೂಹಿಕ ನೃತ್ಯ ಸ್ಪರ್ಧೆ
ಉದ್ಯಾವರ, ನ.6: ಸ್ಥಳೀಯ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಪಂಡಿತ್ ನೆಹರೂರವರ 129ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಆಚರಿಸಲ್ಪಡುವ ಮಕ್ಕಳ ದಿನಾಚರಣೆ ಪ್ರಯುಕ್ತ ನ.16ರಂದು ಬೆಳಗ್ಗೆ 9:30ರಿಂದ ಸಂಜೆ 4:30ರವರೆಗೆ ಉದ್ಯಾವರದ ಶ್ರೀ ವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸಾುೂಹಿಕ ನೃತ್ಯ ಸ್ಪರ್ಧೆ ನಡೆಯಲಿದೆ.
ಯುಎಫ್ಸಿ ಮಕ್ಕಳ ಹಬ್ಬ-2019ರ ಅಂಗವಾಗಿ ನಡೆಯುವ ಈ ಸ್ಪರ್ಧೆಯ ವಿಜೇತ ತಂಡಗಳಿಗೆ ಪ್ರತೀ ವಿಭಾಗದಲ್ಲಿ ಪ್ರಥಮ ರೂ.5,000, ದ್ವಿತೀಯ ರೂ.3,000, ತೃತೀಯ ರೂ. 2,000 ನಗದು, ಸ್ಮರಣಿಕೆ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು. ಅಲ್ಲದೇ ಭಾಗವಹಿಸುವ ಎಲ್ಲಾ ತಂಡಗಳಿಗೆ ರೂ.1,000 ಗೌರವಧನ, ಸ್ಮರಣಿಕೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ತಂಡಗಳು ಮುದ್ರಿತ ಪ್ರವೇಶ ಪತ್ರವನ್ನು ಭರ್ತಿ ಮಾಡಿ ಮುಖ್ಯೋಪಾಧ್ಯಾಯರ ಸಹಿಯೊಂದಿಗೆ ನ.13 ಬುಧವಾರದೊಳಗೆ ಗಿರೀಶ್ ಗುಡ್ಡೆಯಂಗಡಿ, ಪ್ರಧಾನ ಕಾರ್ಯದರ್ಶಿ, ಉದ್ಯಾವರ ಫ್ರೆಂಡ್ಸ್ ಸರ್ಕಲ್, ಉದ್ಯಾವರ-576118 (ಮೊಬೈಲ್ ನಂ.: 9742057018) ಉಡುಪಿ ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷ ತಿಲಕ್ರಾಜ್ ಸಾಲ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.