ಮನನೊಂದ ರೋಗಿ ಆತ್ಮಹತ್ಯೆ
ಮಲ್ಪೆ, ನ.8: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕಾರ್ಕಳ ನೀರೆಬೈಲೂರು ಕೌಡೂರು ನಿವಾಸಿ ಕರುಣಾಕರ ಪೂಜಾರಿ (42) ಜೀವನದಲ್ಲಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರುಣಾಕರ ಪೂಜಾರಿ ಮಾನಸಿಕ ಕಾಯಿಲೆಗೆ ಸಂಬಂಧಿಸಿ ಕಳೆದ ಒಂದೂವರೆ ವರ್ಷದಿಂದ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿ ದ್ದರು. ನ.7ರಂದು ಸಹೋದರ ಕೊಟ್ಟಿದ್ದ ಮಾತ್ರೆ ತೆಗೆದುಕೊಂಡಿದ್ದರು. ಶುಕ್ರವಾರ ಬೆಳಗ್ಗೆ 10:30ಕ್ಕೆ ನೋಡುವಾಗ ಕರುಣಾಕರ ಪೂಜಾರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಾನಸಿಕ ಕಾಯಿಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story