ಕೊಲ್ಲರಕೋಡಿಯಲ್ಲಿ ಮೀಲಾದ್ ಫೆಸ್ಟ್
ನರಿಂಗಾನ, ನ.12: ನೂರುಲ್ ಹುದಾ ಮಸ್ಜಿದ್ ತಖ್ವಾ, ನೂರುಲ್ ಉಲೂಮ್ ಮದರಸ, ಎಸ್ಸೆಸ್ಸೆಫ್ ಕೊಲ್ಲರಕೋಡಿ ಶಾಖೆ ಇದರ ಆಶ್ರಯದಲ್ಲಿ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮೌಲೀದ್ ಪಾರಾಯಣ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೂರುಲ್ ಹುದಾ ಮಸ್ಜಿದ್ ತಖ್ವಾ ಅಧ್ಯಕ್ಷ ಇಬ್ರಾಹೀಂ ಹಾಜಿ ಪಾರೆ ವಹಿಸಿದ್ದರು.
ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಪಿ.ಎ ಅಹ್ಮದ್ ಬಾಖವಿ ಮುಖ್ಯ ಪ್ರಭಾಷಣ ಮಾಡಿದರು. ಕರೀಂ ಫೈಝಿ ಮಂಜನಾಡಿ ಮೌಲಿದ್ ಪಾರಾಯಣದ ನೇತೃತ್ವ ವಹಿಸಿದ್ದರು. ಸೈಯ್ಯದ್ ಯಾಸೀನ್ ಅಲ್ ಹೈದ್ರೋಸಿ ತಂಙಳ್ ಕಲ್ಲಕಟ್ಟ ದುಆಗೈದರು.
ಈ ಸಂದರ್ಭ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹೀಂ ಅಹ್ಸನಿ, ಕೊಲ್ಲರಕೋಡಿ ಮದರಸ ಮುಅಲ್ಲಿಂ ನಜೀಬ್ ಹನೀಫಿ, ಆಲಿ ಕುಂಞಿ ಪಾರೆ, ಅಬ್ದುಲ್ ರಝಾಕ್ ಪಾರೆ, ನರಿಂಗಾನ ಗ್ರಾಪಂ ಸದಸ್ಯ ಅಬ್ದುಲ್ ಖಾದರ್ ಚೌಕ, ಎಸ್ಸೆಸ್ಸೆಫ್ ಕೊಲ್ಲರಕೋಡಿ ಘಟಕಾಧ್ಯಕ್ಷ ಆಸಿಫ್, ಮುಹಮ್ಮದ್ ಎನ್.ಐ, ಎನ್.ಎಂ ಅಬ್ದುಲ್ ರಹ್ಮಾನ್ ಹಾಜಿ ಮತ್ತಿತರರು ಉಪಸ್ಥಿತರಿದರು.
ಕೊಲ್ಲರಕೋಡಿ ಮದರಸ ಸದರ್ ಯಾಕುಬ್ ಲತೀಫಿ ಕಾರ್ಯಕ್ರಮ ನಿರೂಪಿಸಿದರು.