ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು
ಕಾರ್ಕಳ, ನ.12: ಇರ್ವತ್ತೂರು ಗ್ರಾಮದ ಗೋಳಿದಿಂಡಿ ಎಂಬಲ್ಲಿರುವ ಸೇತುವೆ ಬಳಿ ನ.11ರಂದು ಸಂಜೆ 7ಗಂಟೆ ಸುಮಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಇರ್ವತ್ತೂರು ಗ್ರಾಮದ ಗುಂಡಿಮಾರು ನಿವಾಸಿ ದಿನೇಶ ಆಚಾರ್ಯ(45) ಎಂದು ಗುರುತಿಸಲಾಗಿದೆ. ಮುರತಂಗಡಿ ಕಡೆಯಿಂದ ಇರ್ವತ್ತೂರು ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದಿನೇಶ್ ಆಚಾರ್ಯಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story