ಕೋಟ: ಅಪಘಾತದ ಗಾಯಾಳು ಮೃತ್ಯು
ಕೋಟ, ನ.13: ಮೂರು ವರ್ಷಗಳ ಹಿಂದೆ ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಸಾಲಿಗ್ರಾಮ ದೇವಸ್ಥಾನ ಬಳಿಯ ನಿವಾಸಿ ಕೃಷ್ಣಯ್ಯ ಆಚಾರ್ಯ ಎಂಬವರ ಪತ್ನಿ ಪ್ರಭಾವತಿ(39) ಎಂದು ಗುರುತಿಸಲಾಗಿದೆ. ಇವರು 2016ರ ಮೇ 8ರಂದು ಸಂಜೆ ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯನ್ನು ದಾಟು ತ್ತಿರುವಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೊೀಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತು.
ಗಂಭೀರವಾಗಿ ಗಾಯಗೊಂಡಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ.5ರಂದು ಅಸೌಖ್ಯದಿಂದ ಬಳಲುತ್ತಿದ್ದ ಪ್ರಭಾವತಿ ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನ.13ರಂದು ಮೃತ ಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story