ಮಂಗಳೂರು, ನ.15: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಜನಪ್ರತಿನಿಧಿಗಳಿಗೆ ಅಭಿನಂದನಾ ಸಭೆ ಮತ್ತು ವಿಜಯೋತ್ಸವವು ನ.16ರಂದು ಸಂಜೆ 5ಕ್ಕೆ ನಗರದ ಕದ್ರಿ ಮೈದಾನದಲ್ಲಿ ನಡೆಯಲಿದೆ.
ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.