ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿಲಯ 'ರಾಮಚಂದ್ರ' ಉದ್ಘಾಟನೆ
ಮೂಡುಬಿದಿರೆ: ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರದಲ್ಲಿ ಶಿಕ್ಷಣ ಪಡೆಯುವುದರಿಂದ ಮನಸ್ಸಿನ ಪವಿತ್ರತೆ ಹೆಚ್ಚುತ್ತದೆ. ಭಾರತೀಯ ಸಂಸ್ಕೃತಿಯನ್ನು ಶಿಕ್ಷಣದಲ್ಲಿ ನೀಡಿದರೆ ವಿದ್ಯಾರ್ಥಿಯ ವ್ಯಕ್ತಿತ್ವ ಸುಂದರವಾಗಿ ರೂಪುಗೊಳ್ಳಲು ಸಾಧ್ಯ, ಜ್ಞಾನ, ಗುಣ, ಪ್ರಯತ್ನ, ಸದ್ವಿಚಾರಗಳು ವಿದ್ಯಾರ್ಥಿಗಳಲ್ಲಿದ್ದರೆ ಬದುಕು ಬಂಗಾರವಾಗುತ್ತದೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳಲ್ಲಿ ಶಾಶ್ವತ ಪ್ರಭಾವವಾಗಬೇಕು ಎಂದು ಶ್ರೀ ಕ್ಷೇತ್ರ ಕನಕಗಿರಿಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ನುಡಿಸಿದರು.
ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಶನಿವಾರ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ `ರಾಮಚಂದ್ರ' ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ವಿದ್ಯಾರ್ಥಿನಿಲಯವನ್ನು ಉದ್ಘಾಟಿಸಿ, ಬದುಕುವ ಶಿಕ್ಷಣದ ಜೊತೆಗೆ ಸಂಸ್ಕೃತಿ ಶಿಕ್ಷಣ ಮುಖ್ಯ. ಸಂಸ್ಕೃತಿ ಶಿಕ್ಷಣದಿಂದ ಮೌಲ್ಯಗಳು ಹೆಚ್ಚಾಗುತ್ತದೆ. ವ್ಯಕ್ತಿಯಲ್ಲಿ ಮೌಲ್ಯಯುತ ತತ್ವಗಳಿದ್ದಲ್ಲಿ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ. ಎಕ್ಸಲೆಂಟ್ ಸಂಸ್ಥೆಯ ಕ್ಯಾಂಪಸ್, ಹಾಸ್ಟೆಲ್ನಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಮಯಪಾಲನೆ, ಹೊಂದಾಣಿಕೆ, ಶಿಸ್ತು, ತೆರೆದ ಮನಸ್ಸಿನಿಂದ ಇತರರ ಪ್ರತಿಭೆಯನ್ನು ಅರಿಯುವ, ತನ್ನ ಪ್ರತಿಭೆಯನ್ನು ಅರಳಿಸುವ ಅವಕಾಶವಿದೆ ಎಂದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಭಾರತೀಯ ಜೈನ್ಮಿಲನ್ ವಲಯ 8ರ ಅಧ್ಯಕ್ಷ ಪುಷ್ಪರಾಜ್ ಜೈನ್ ಮುಖ್ಯ ಅತಿಥಿಯಾಗಿದ್ದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮಾರ್ಗದರ್ಶಕ, ವಾಸ್ತುತಜ್ಞ ರಾಮಚಂದ್ರ ಆಚಾರ್ ದಂಪತಿಯನ್ನು ಸನ್ಮಾನಿಸಲಾಯಿತು.
ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಸ್ವಾಗತಿಸಿದರು. ಪ್ರಾಂಶುಪಾಲ ಪ್ರದೀಪ್ಕುಮಾರ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಗುರುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಲೋಹಿತ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.
ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿಲಯ ರಾಮಚಂದ್ರ ವಿದ್ಯಾರ್ಥಿನಿಲಯ ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಮಾರ್ಗದರ್ಶಕ, ವಾಸ್ತುತಜ್ಞ ರಾಮಚಂದ್ರ ಆಚಾರ್ ದಂಪತಿಯನ್ನು ಸನ್ಮಾನಿಸಲಾಯಿತು. ಶ್ರೀ ಕ್ಷೇತ್ರ ಕನಕಗಿರಿಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ, , ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಉದ್ಯಮಿ ಪುಷ್ಪರಾಜ್ ಜೈನ್, ಎಕ್ಸಲೆಂಟ್ ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.