ಐವನ್ಗೆ ಉಪಚುನಾವಣೆಯ ಉಸ್ತುವಾರಿ
ಮಂಗಳೂರು, ನ.18: ರಾಜ್ಯದ ಉಪಚುನಾವಣೆಯಲ್ಲಿ ಶಿವಾಜಿನಗರ ಕೆ.ಆರ್.ಪುರಂ ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಕಗೊಳಿಸಿದ್ದಾರೆ.
ಈಗಾಗಲೇ ಐವನ್ ಕ್ಷೇತ್ರಕ್ಕೆ ತೆರಳಿ ಚುನಾವಣ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story