ಹಾನಿಕಾರಕ ಮೀನುಗಾರಿಕೆ ನಡೆಸಿದರೆ ಕಠಿಣ ಕ್ರಮ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ನ.19: ರಾಜ್ಯ ಸರಕಾರವು ಸಮುದ್ರದಲ್ಲಿ ಬುಲ್ಟ್ರಾಲಿಂಗ್, ಬೆಳಕು ಮೀನುಗಾರಿಕೆ, ಚೌರಿ ಮತ್ತಿತರ ಕೊಳೆತ ವಸ್ತುಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಮೀನು ಹಿಡಿಯುವುದು ಮುಂತಾದ ಹಾನಿಕಾರಕ ಮೀನುಗಾರಿಕಾ ಪದ್ಧತಿ ಗಳನ್ನು ಜಿಲ್ಲೆಯಲ್ಲಿ ನಿಷೇಧಿಸಿದೆ.
ಆದರೂ ಇತ್ತೀಚಿನ ದಿನಗಳಲ್ಲಿ ಸಮುದ್ರದಲ್ಲಿ ನಿಷೇಧಿತ ಮೀನುಗಾರಿಕೆ ಪ್ರಮುಖವಾಗಿ ಬುಲ್ಟ್ರಾಲ್, ಬೆಳಕು ಮೀನುಗಾರಿಕೆಯಲ್ಲಿ ಕೆಲವರು ತೊಡಗುತ್ತಿರುವ ದೂರುಗಳು ಬಂದಿದ್ದು, ಈ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್ ಪಡೆ ಹಾಗೂ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಪಾಲನೆಗೆ ತಿಳಿಸಲಾಗಿದೆ. ಆದೇಶದ ಉಲ್ಲಂಘನೆ ಕಂಡು ಬಂದಲ್ಲಿ ಮೀನು ಗಾರಿಕಾ ಲೈಸನ್ಸ್ ರದ್ಧತಿ, ಡೀಸೆಲ್ ತಡೆಹಿಡಿಯುವಂತಹ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜದೀಶ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Next Story