ನ. 23ರಂದು ಆದಾಯ ತೆರಿಗೆ ಕುರಿತು ವಿಚಾರಗೋಷ್ಠಿ
ಉಡುಪಿ, ನ. 21: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಉಡುಪಿ ಶಾಖೆಯು ‘ಆದಾಯ ತೆರಿಗೆ ಸರ್ವೇ, ದಾಳಿ, ವಶ: ಸರ್ವೆ ಬಳಿಕದ ವೌಲ್ಯಮಾಪನ’ ಎಂಬ ವಿಷಯದ ಕುರಿತು ವಿಚಾರಗೋಷ್ಠಿ ನ.23ರ ಶನಿವಾರ ಬೆಳಗ್ಗೆ 9:30ರಿಂದ ಅಪರಾಹ್ನ 2 ಗಂಟೆಯವರೆಗೆ ನಡೆಯಲಿದೆ.
ಕಾರ್ಯಕ್ರಮವು ಕುಂಜಿಬೆಟ್ಟಿನಲ್ಲಿರುವ ಶ್ರೀಮಹಾಲಸ ದಾಮೋದರ ಟವರ್ಸ್ನ ಮೊದಲ ಮಹಡಿಯಲ್ಲಿರುವ ಐಸಿಎಐ ಭವನದ ಸೆಮಿನಾರ್ ಹಾಲ್ನಲ್ಲಿ ನಡೆಯಲಿದೆ. ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶರಾದ ಸಿ.ಎಂ.ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರಿನ ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ವಕೀಲರಾದ ಎ.ಶಂಕರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಉಡುಪಿ ಶಾಖೆಯ ಪ್ರಕಟಣೆ ತಿಳಿಸಿದೆ.
Next Story