ಅಮಾನುತುಗೊಂಡಿದ್ದ ಎಸ್ಸೈ ಡಿಸಿಐಬಿಗೆ ವರ್ಗ
ಉಡುಪಿ, ನ.21: ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇತ್ತೀಚೆಗೆ ಅಮಾನತುಗೊಂಡಿದ್ದ ಉಡುಪಿ ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಅನಂತ ಪದ್ಮನಾಭ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ ಉಡುಪಿ ಡಿಸಿಐಬಿಗೆ ವರ್ಗಾವಣೆಗೊಳಿಸಿ ಆದೇಶ ನೀಡಲಾಗಿದೆ.
ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿ ನ.2ರಂದು ಗೆಳತಿಯೊಂದಿಗೆ ಮಾತ ನಾಡುತ್ತಿದ್ದ ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಪ್ರಕರಣ ದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಉಡುಪಿ ನಗರ ಠಾಣಾ ಎಸ್ಸೈ ಅನಂತಪದ್ಮನಾಭ ಹಾಗೂ ಹೆಡ್ಕಾನ್ಸ್ಟೇಬಲ್ ಜೀವನ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ನ.11ರಂದು ಅಮಾನತುಗೊಳಿಸಿ ಆದೇಶ ನೀಡಿದ್ದರು.
ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎಸ್ಪಿ ಮಂಗಳೂರು ಪಶ್ಚಿಮ ವಲಯ ಐಜಿಪಿಯವರಿಗೆ ಕಳುಹಿಸಿಕೊಟ್ಟಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಐಜಿಪಿ ಎಸ್ಸೈ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ ವರ್ಗಾವಣೆ ಮಾಡಿದ್ದಾರೆ. ಆದರೆ ಹೆಡ್ಕಾನ್ಸ್ಟೇಬಲ್ ಜೀವನ್ ಕುಮಾರ್ ಅವರ ಅಮಾನತು ಆದೇಶ ರದ್ದುೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.