ಮಿನಿಲಾರಿ ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ನ.27: ಪಾಂಗಾಳ ಜನಾರ್ದನ ದೇವಸ್ಥಾನದ ಬಳಿಯ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಿನಿ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿ ಯಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ಸುಲೇಟರ್ ಮಿನಿಲಾರಿ ರಸ್ತೆ ಬದಿ ನಿಂತಿದ್ದ ಮಾಧವ ಸುವರ್ಣರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಮಿನಿಲಾರಿಯನ್ನು ಚಾಲಕ ಅಲ್ಲೇ ನಿಲ್ಲಿಸಿ ಓಡಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story