ಚಿತ್ರಕಲಾ ಸ್ಪರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ
ಮಂಗಳೂರು, ಡಿ. 9: ಕೇಂದ್ರ ಸರಕಾರದ ಇಂಧನ ಇಲಾಖೆಯು ಏರ್ಪಡಿಸಿದ ಇಂಧನ ಉಳಿತಾಯ ಕುರಿತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಗರದ ಉರ್ವ ಕೆನರಾ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಆಯುಷ್ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆ ನಡೆಯಲಿದೆ. ಇವರು ಸುಮಿತ್ರಾ ಮತ್ತು ಯಶವಂತ ಕುಮಾರ್ ದಂಪತಿ ಪುತ್ರ.
Next Story