ಫರಂಗಿಪೇಟೆ: ಎಸ್ಡಿಪಿಐ ಕಾರ್ಯಕರ್ತರ ಸಭೆ
ಫರಂಗಿಪೇಟೆ, ಡಿ.9: ನಡೆದ ಎಸ್ಡಿಪಿಐ ಕಾರ್ಯಕರ್ತರ ಸಭೆಯು ಫರಂಗಿಪೇಟೆಯ ಸಭಾಂಗಣದಲ್ಲಿ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಸಮಾಜದಲ್ಲಿರುವ ಭಯ, ಹಸಿವು, ಭ್ರಷ್ಟಾಚಾರ, ಪಕ್ಷಪಾತ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಇತರರು ಬರಬಹುದು ಎಂದು ನಿರೀಕ್ಷಿಸುವ ಬದಲು ಜವಾಬ್ದಾರಿಯಿಂದ ಸ್ವತಹ ಬದಲಾವಣೆ ಮಾಡಲು ಪ್ರಯತ್ನಿಸಬೇಕಾಗಿದೆ, ಕೇಂದ್ರ ಸರಕಾರವು ಅಲ್ಪಸಂಖ್ಯಾತ ಸಮುದಾಯವನ್ನು ದಮನಿಸುವುದಕ್ಕಾಗಿ ವಿವಿಧ ಕಾನೂನುಗಳನ್ನು ತರುತ್ತಿರುವಾಗ ಅದರ ವಿರುದ್ಧ ಧ್ವನಿ ಎತ್ತಬೇಕಾದ ಜಾತ್ಯಾತೀತ ನಾಯಕರು ಮತ್ತು ಜನಪ್ರತಿನಿಧಿಗಳು ಮೌನವಾಗಿದ್ದು ಭೃಷ್ಟ ಪಕ್ಷಪಾತ ವ್ಯವಸ್ಥೆಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದರು.
ಎಸ್ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಎಸ್ಡಿಪಿಐ ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್ ಐಎಂಆರ್, ಪಾಪ್ಯುಲರ್ ಫ್ರoಟ್ ಆಫ್ ಇಂಡಿಯಾ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರು ಉಪಸ್ಥಿತರಿದ್ದರು.
ಎಸ್ಡಿಪಿಐ ತುಂಬೆ ಗ್ರಾಮ ಸಮಿತಿ ಸದಸ್ಯರಾದ ಇರ್ಫಾನ್ ತುಂಬೆ ಸ್ವಾಗತಿಸಿದರು. ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಝಹೂರ್ ತುಂಬೆ ಕಾರ್ಯಕ್ರಮ ನಿರೂಪಿಸಿದರು. ಶರೀಫ್ ಅಮೆಮ್ಮಾರ್ ವಂದಿಸಿದರು.