ಉಪ್ಪಿನಂಗಡಿ: ಕಾರು ಢಿಕ್ಕಿ; ವೃದ್ಧ ಸಾವು
ಉಪ್ಪಿನಂಗಡಿ: ಮೂತ್ರವಿಸರ್ಜನೆಗೆಂದು ಬಸ್ನಿಂದ ಇಳಿದ ವೃದ್ಧರೋರ್ವರು ಕಾರು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಗುರುವಾರ ನಸುಕಿನ ವೇಳೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಪುಲ್ಲೊಟ್ಟೆ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರು ನಿವಾಸಿಯಾಗಿರುವ ಸೂರ್ಯನಾರಾಯಣ ರಾವ್ (82) ಎಂಬವರು ಮೃತ ವ್ಯಕ್ತಿ. ಬೆಂಗಳೂರಿನಿಂದ ಕಾರ್ಯನಿಮಿತ್ತ ಕುಂದಾಪುರಕ್ಕೆ ಖಾಸಗಿ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಅವರು ಶಿರಾಡಿ ಗ್ರಾಮದಲ್ಲಿ ಬಸ್ನಿಂದ ಇಳಿಯುತ್ತಿದ್ದಂತೆಯೇ, ಈ ಸಂದರ್ಭ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಈ ಪ್ರಕರಣಕ್ಕೆ ಸಂಬಂಧಿಸಿ ಬಸ್ಸನ್ನು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಿದ ಬಸ್ ಚಾಲಕನ ವಿರುದ್ಧ ಹಾಗೂ ಅತೀ ವೇಗದಿಂದ ವಾಹನ ಚಲಾಯಿಸಿದ ಕಾರು ಚಾಲಕನ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story