ಡಿ.19ರ ಪ್ರತಿಭಟನೆ ಮುಂದೂಡಿಕೆ: ಸಿಪಿಎಂ
ಮಂಗಳೂರಿನಲ್ಲಿ ನಿಷೇಧಾಜ್ಞೆ
ಮಂಗಳೂರು: ಸೆ.144 ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಡಿ.19ರಂದು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸಲು ಉದ್ದೇಶಿಸಲಾಗಿರುವ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ 'ವಾರ್ತಾಭಾರತಿ'ಗೆ ತಿಳಿಸಿದ್ದಾರೆ.
ಇದು ದೇಶವ್ಯಾಪಿ ಎಡಪಕ್ಷಗಳು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯಾಗಿತ್ತು. ಪೊಲೀಸ್ ಇಲಾಖೆಯಿಂದಲೂ ಪ್ರತಿಭಟನೆಗೆ ಅನುಮತಿ ಪಡೆಯಲಾಗಿತ್ತು. ಈ ಮಧ್ಯೆ ಪೊಲೀಸ್ ಅಧಿಕಾರಿಗಳು ಇಂದು ಸಂಜೆ ನಮ್ಮನ್ನು ಸಂಪರ್ಕಿಸಿ ಡಿ.19ರಂದು ಪ್ರತಿಭಟನೆ ನಡೆಸದಂತೆ ಸೂಚಿಸಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಸದ್ಯ ಡಿ.19ರ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ವಸಂತ ಆಚಾರಿ ತಿಳಿಸಿದ್ದಾರೆ.
Next Story