ಶಾಂತಿ ಕಾಪಾಡಲು ದ.ಕ. ಜಿಲ್ಲಾಧಿಕಾರಿ, ಶಾಸಕ ಕಾಮತ್ ಮನವಿ
ಮಂಗಳೂರಿನಲ್ಲಿ ಗುರುವಾರ ಅನಿರೀಕ್ಷಿತವಾಗಿ ಅಹಿತಕರ ಘಟನೆ ನಡೆದಿದೆ. ಜಿಲ್ಲೆಯ ಹಿತಕ್ಕಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹಬ್ಬಬೇಡಿ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಬೇಡಿ. ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಎಲ್ಲರೂ ಸಹಕರಿಸಬೇಕಿದೆ
ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.
ಕಳೆದ ಒಂದುವರೆ ವರ್ಷಗಳಿಂದ ಶಾಂತವಾಗಿದ್ದ ಮಂಗಳೂರಿನಲ್ಲಿ ಮತ್ತೆ ಅಶಾಂತಿ ಸೃಷ್ಟಿಯಾಗುವುದು ಬೇಡ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಬೇಡಿ. ಶಾಂತಿ ಸಮನ್ವಯ ಬೆಳೆಸುವ ನಿಟ್ಟಿನಲ್ಲಿ ಯಾರೂ ಕೂಡ ವದಂತಿಗಳಿಗೆ ಹಾಗೂ ಪ್ರಚೋದನೆಗೆ ಒಳಗಾಗದೆ ಶಾಂತಿಯಿಂದಿರಬೇಕೆಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
ಪೊಲೀಸ್ ಇಲಾಖೆಯ ಅಧಿಕಾರಿಗಳೂ ಕೂಡ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಾಮತ್ ಸೂಚಿಸಿದ್ದಾರೆ.
Next Story