ಸಹಕಾರಿ ದೇಶದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುವ ಏಕೈಕ ಕ್ಷೇತ್ರ: ಡಾ.ರಾಜೇಂದ್ರ ಕುಮಾರ್
ಉಡುಪಿ, ಡಿ.22: ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ವ್ಯವಸ್ಥೆಗೆ ಸಹಕಾರಿ ಕ್ಷೇತ್ರವು ಬಹಳ ದೊಡ್ಡ ಕೊಡುಗೆ ನೀಡಿದೆ. ದೇಶದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ಏಕೈಕ ವ್ಯವಸ್ಥೆ ಅಂದರೆ ಅದು ಸಹಕಾರಿ ಕ್ಷೇತ್ರ. ಉತ್ತಮ ಸೇವೆಯ ಮೂಲಕ ಬಹಳಷ್ಟು ಅಭಿವೃದ್ಧಿ ಕಂಡಿರುವ ಬಡಗಬೆಟ್ಟು ಕ್ರೆಡಿಟ್ ಕೋಆಪ ರೇಟಿವ್ ಸೊಸೈಟಿಯು ಬ್ಯಾಂಕ್ ಆಗಿ ಮೂಡಿಬರಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ರವಿವಾರ ನಡೆದ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮಂತ್ರಾಲಯ ಮಠದ ಶ್ರೀಸುಭುದೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ನೂರು ವಸಂತಗಳನ್ನು ಕಂಡಿರುವ ಬಡಗಬೆಟ್ಟು ಸೊಸೈಟಿ ಜನರ ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಹೂಡಿಕೆದಾರರಿಗೆ ಉತ್ತಮ ಫಲವನ್ನು ನೀಡುವುದರ ಜತೆಗೆ ಇನ್ನಷ್ಟು ಬಡಜನರ ಸೇವೆ ಮಾಡುವ ಮೂಲಕ ಹೆಮ್ಮಾರವಾಗಿ ಬೆಳೆಯಬೇಕು ಎಂದು ಹಾರೈಸಿದರು.
ಶತಮಾನೋತ್ಸವ ಸಂಭ್ರಮಾಚರಣೆಯ ಸ್ಮರಣ ಸಂಚಿಕೆಯನ್ನು ಬಿಡುಗಡೆ ಗೊಳಿಸಿದ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತ ನಾಡಿ, 100 ವರ್ಷಗಳನ್ನು ಪೂರೈಸುವ ಮೂಲಕ ಈ ಸೊಸೈಟಿ ತನ್ನ ಶಕ್ತಿಯನ್ನು ತೋರಿಸಿಕೊಟ್ಟಿದೆ. ಇದಕ್ಕೆ ದೇವರ ಅನುಗ್ರಹ ಹಾಗೂ ಜನರ ವಿಶ್ವಾಸ ಗಳಿಸಿ ರುವುದೇ ಕಾರಣವಾಗಿದೆ ಎಂದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ, ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಅಮರನಾಥ ಶೆಟ್ಟಿ ಮಾತನಾಡಿದರು. ಉದ್ಯಮಿ ಮನೋಹರ್ ಶೆಟ್ಟಿ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಪಿ.ಶೆಟ್ಟಿ, ಉಪಾಧ್ಯಕ್ಷ ಎಲ್.ಉಮಾನಾಥ್ ಮೊದ ಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಕ್ಷರ ಸಂತ ಹರೆಕಳ ಹಾಜಬ್ಬ, ಸಾಧಕಿ ವಿಕಲಚೇತನ ರಮ್ಯ ಐತಾಳ್ ಅವರನ್ನು ಸನ್ಮಾನಿಸಲಾಯಿತು. ಸಂಘದಲ್ಲಿ ಅತಿ ಹೆಚ್ಚಿನ ವರ್ಷ ಗಳ ಕಾಲ ಸೇವೆ ಸಲ್ಲಿಸಿದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ನಿವೃತ್ತ ಸಿಬ್ಬಂದಿಗಳು, ದೈನಿಕ ಠೇವಣಿ ಸಂಗ್ರಹಾಕರು, ಪ್ಯಾನೆಲ್ ಸದಸ್ಯರನ್ನು ಸನ್ಮಾನಿಸಲಾಯಿತು.
ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿದರು. ಉಡುಪಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಮಾರು 300 ವಿದ್ಯಾರ್ಥಿಗಳ ತಂಡದಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಮತ್ತು ರೋಹಿತ್ ಮಲ್ಪೆ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.