ಟೆಂಪೋ ಢಿಕ್ಕಿ: ಬೈಕ್ ಸವಾರ ಮೃತ್ಯು
ಮಂಗಳೂರು, ಜ.3: ಗುರುಪುರ ಕೈಕಂಬ ಸಮೀಪದ ಪೊಳಲಿ ದ್ವಾರ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬೈಕ್-ಟೆಂಪೋ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಕುಂಪಲ ನಿವಾಸಿ ಸುಕುಮಾರ್ (35) ಮೃತ ಬೈಕ್ ಸವಾರ.
ಸುಕುಮಾರ್ ಅವರು ಶುಕ್ರವಾರ ಮಧ್ಯಾಹ್ನ 12:30ಕ್ಕೆ ಕೆಲಸದ ನಿಮಿತ್ತ ಕೈಕಂಬದಿಂದ ಗುರುಪುರವಾಗಿ ಮಂಗಳೂರಿನತ್ತ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರು ದಿಕ್ಕಿನಿಂದ ಕೈಕಂಬದತ್ತ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಸಂಚರಿಸುತ್ತಿದ್ದ ಟೆಂಪೋ ಪೊಳಲಿ ದ್ವಾರದ ಬಳಿ ಬೈಕ್ಗೆ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತಲೆ ಮತ್ತು ದೇಹದ ಇತರ ಕೆಲವೆಡೆ ಗಂಭೀರ ಗಾಯಗಳಾಗಿದ್ದ ಸುಕುಮಾರ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story