ಟೆಂಪೊ ಢಿಕ್ಕಿ: ಪಾದಚಾರಿ ಮೃತ್ಯು
ಬೈಂದೂರು, ಜ.11: ಬೈಂದೂರು ಖತೀಜಾ ಕುಬ್ರಾ ಮಸೀದಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.10ರಂದು ಸಂಜೆ ವೇಳೆ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಟೆಂಪೋ ರಸ್ತೆಯ ಅಂಚಿನಲ್ಲಿ ನಿಂತಿದ್ದ ಸುಬ್ಬಯ್ಯ ಪೂಜಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಅಪಘಾತ ಪಡಿಸಿದ ಟೆಂಪೋವನ್ನು ಚಾಲಕ ನಿಲ್ಲಿಸದೆ ಪರಾರಿ ಯಾಗಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story