ಜಾನುವಾರು ಕಳವು ಪ್ರಕರಣ : ಆರೋಪಿ ಸೆರೆ
ಕಡಬ : ಜಾನುವಾರು ಕಳವು ಮಾಡಿದ ಆರೋಪದಲ್ಲಿ ಕಡಬ ಪೊಲೀಸರು ಓರ್ವನನ್ನು ಬಂಧಿಸಿ, ದನಕರುಗಳು ಸೇರಿದಂತೆ ಕತ್ತಿ, ತೂಕದ ಮಾಪನಗಳನ್ನು ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕೊಯ್ಲ ಗ್ರಾಮದ ಬಡ್ಡಮೆ ಎಂಬಲ್ಲಿ ನಡೆದಿದೆ.
ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಕಡಬ ಪೊಲೀಸರು ಮಹಮ್ಮದ್ ಮುಸ್ತಫಾ ಎಂಬಾತನನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಇಲ್ಯಾಸ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಕಳವು ಮತ್ತು ಪ್ರಾಣಿ ಹಿಂಸೆ ಪ್ರಕರಣ ದಾಖಲಾಗಿದೆ.
Next Story