ತೆಂಕನಿಡಿಯೂರು: ಕ್ಯಾಂಪಸ್ ಸಂದರ್ಶನ
ಉಡುಪಿ, ಜ.14:ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಉದ್ಯೋಗ ಮಾಹಿತಿ ಘಟಕ ಹಾಗೂ ಐಕ್ಯೂಎಸಿ ವತಿಯಿಂದ ಕ್ಯಾಂಪಸ್ ಸಂದರ್ಶನವು ಸೆಮವಾರ ಕಾಲೇಜಿನಲ್ಲಿ ನಡೆಯಿತು.
ಪ್ರತಿಷ್ಠಿತ ದಿಯಾ ಸಿಸ್ಟಮ್ ಇವರು ಕ್ಯಾಂಪಸ್ ಸಂದರ್ಶನ ನಡೆಸಿಕೊಟ್ಟರು. ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ, ದಿಯಾ ಸಿಸ್ಟಮ್ನ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಎಬಿನೆಜರ್ ರಾಜಾ, ಸಮೃದ್ಧಿ, ತಾಂತ್ರಿಕ ತರಬೇತುದಾರ ನಿತೇಶ್, ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ಉದ್ಯೋಗ ಮಾಹಿತಿ ಘಟಕ ಸಂಚಾಲಕ ಪ್ರೊ. ಉಮೇಶ್ ಪೈ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
Next Story