ಜ.24: ಬಯೋ ಮೆಡಿಕಲ್ ತ್ಯಾಜ್ಯ ಜಾಗೃತಿ ಕಾರ್ಯಕ್ರಮ
ಮಂಗಳೂರು, ಜ.23: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ನಿಟ್ಟೆ ವಿವಿ, ದ.ಕ. ಜಿಲ್ಲಾಡಳಿತದ ಆಶ್ರಯದಲ್ಲಿ ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ನಿರ್ದೇಶನ ಕುರಿತು ಜಾಗೃತಿ ಕಾರ್ಯಕ್ರಮವು ಜ.24ರಂದು ಬೆಳಗ್ಗೆ 9:30ಕ್ಕೆ ದೇರಳಕಟ್ಟೆ ನಿಟ್ಟೆ ವಿವಿಯ ಹೊಸ ಸಭಾಂಗಣದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿವಿ ಉಪಕುಲಪತಿ ಡಾ.ಬಿ.ಸತೀಶ್ ಕುಮಾರ್ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
Next Story