ರಂಗ ನಿರ್ದೇಶಕ ಎಚ್.ಕೆ. ನಯನಾಡುಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬಂಟ್ವಾಳ, ಜ. 25: ರಂಗನಿರ್ದೇಶಕ, ಸಾಹಿತಿ, ಎಚ್.ಕೆ. ನಯನಾಡು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜ.26ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ನಯನಾಡು ನಾಟಕ ರಚನೆಗಾರರಾಗಿ, ನಟರಾಗಿ, ನಿರ್ದೇಶಕರಾಗಿ, ಕವಿಯಾಗಿ, ಸಂಘಟಕರಾಗಿ, ಸಾಹಿತಿಯಾಗಿ, ಚಲನಚಿತ್ರ ಕಲಾವಿದರಾಗಿ, ಸಂಘಟಕರಾಗಿ, ಸಾಮಾಜಿಕ/ ಸಾಹಿತ್ಯ/ ಕಲೆ/ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
Next Story