ರೇಣುಕಾಚಾರ್ಯ ವಿರುದ್ಧ ಅಲ್ಪಸಂಖ್ಯಾತರ ಆಯೋಗಕ್ಕೆ ದೂರು
ಮಂಗಳೂರು, ಜ.25: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ರಾಜ್ಯ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ದೂರು ನೀಡಿ ಒತ್ತಾಯಿಸಿದ್ದಾರೆ.
‘ಮಸೀದಿಗಳಲ್ಲಿ ಪ್ರಾರ್ಥನೆಯ ಬದಲು ಶಸ್ತ್ರಾಸ್ತ್ರ ಸಂಗ್ರಹ ಮಾಡಿದ್ದಾರೆ, ಇದಕ್ಕಾಗಿ ಮಸೀದಿಗಳು ಬೇಕಿತ್ತಾ? ಮುಸ್ಲಿಮರನ್ನು ಎಲ್ಲಿಡಬೇಕೋ, ಅಲ್ಲಿಡಬೇಕು, ಅವರ ಬೆಂಬಲ ನನಗೆ ಬೇಡ’ ಎಂಬ ಬೇಜವಾಬ್ದಾರಿ ಹೇಳಿಕೆಯನ್ನು ಸಾರ್ವಜನಿಕವಾಗಿ ನೀಡಿದ್ದಾರೆ. ಹಾಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಈ ದೂರಿಗೆ ಸ್ಪಂದಿಸಿರುವ ಆಯೋಗವು ಈ ಬಗ್ಗೆ ಸೂಕ್ತ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಎಸ್ಪಿಗೆ ಪತ್ರ ಬರೆದು ನಿರ್ದೇಶಿಸಿದೆ.
Next Story