ಮಂಗಳೂರು: ಹೊನಲು ಬೆಳಕಿನ ಕಂಬಳಕ್ಕೆ ಚಾಲನೆ
ಮಂಗಳೂರು, ಜ. 25: ನಗರದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಬಂಗ್ರ ಕೂಳೂರಿ ನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಿರ್ಮಿಸಲಾದ ಹೊನಲು ಬೆಳಕಿನ ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಬ್ರಹ್ಮ ಬೈದರ್ಕಳ ಗರಡಿಯ ಅಧ್ಯಕ್ಷ ಕೆ.ಚಿತ್ತರಂಜನ್ ಜೋಡುಕರೆ ಕಂಬಳಕ್ಕೆ ಚಾಲನೆ ನಿಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ನಿಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಉಳ್ಳಾಲ ನಂದನ ಮಲ್ಯ, ಗುನಪಾಲ ಕಡಂಭ, ವಿಜಯ ಕುಮಾರ್ ಕಂಗಿ, ಕಿಶೋರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.