ಗಣರಾಜ್ಯೋತ್ಸವ: ಕ್ರೀಡಾ ಪ್ರತಿಭೆ ಶ್ವೇತಾಗೆ ಸನ್ಮಾನ
ಹೆಬ್ರಿ, ಜ.26: ಪಡುಕುಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರ ನಡೆದ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯ ಮಟ್ಟದ ಕ್ರೀಡಾ ಪ್ರತಿಭೆ ಶ್ವೇತಾ ಅವರಿಗೆ ಮುನಿಯಾಲು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ಬಿನ ಶಂಕರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುನಿಯಾಲು ಲಯನ್ಸ್ ಕ್ಲಬ್ಬಿನ ಅಶೋಕ ಎಂ.ಶೆಟ್ಟಿ, ಖಜಾನೆ ಸಂದೇಶ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಕೇಶವ ನಾಯಕ್, ಮುಖ್ಯ ಶಿಕ್ಷಕಿ ಪ್ರೇಮಾ ಎಂ ಉಪಸ್ಥಿತರಿದ್ದರು. ಶಿಕ್ಷಕರಾದ ಸುಮನಾ ಭಟ್ ಸ್ವಾಗತಿಸಿ ಶ್ರುತಿ ವಂದಿಸಿ ದೈಹಿಕ ಶಿಕ್ಷಣ ಶಿಕ್ಷಕಿ ಕಮಲಿನಿ ನಿರೂಪಿಸಿದರು.
Next Story