ಸುಳ್ಳು ಸುದ್ದಿ ಹರಡುವವರ ವಿರುದ್ಧ ‘ಯುಎಪಿಎ’ ಕ್ರಮ: ಮಂಗಳೂರು ಕಮಿಷನರ್
ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ
ಮಂಗಳೂರು, ಜ.26: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಪ್ರಕರಣ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಆಧಾರ ರಹಿತ ಸುದ್ದಿ ಹರಡುತ್ತಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.
ಸುಳ್ಳು ವರದಿ ಹಬ್ಬಿಸಿದವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಬಳಿಕ ಅವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು. ಸುಳ್ಳು ಸುದ್ದಿಗಳನ್ನು ಯಾರೇ ಹಬ್ಬಿಸಿದರೂ ಅಂತಹವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ (ಯುಎಪಿಎ) ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
Next Story