ಉಪ್ಪಿನಂಗಡಿ: ಗುಜಿರಿ ಅಂಗಡಿಯಲ್ಲಿ ಕಳವು ; ಮೂವರ ಬಂಧನ
ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಎಂಬಲ್ಲಿರುವ `ಜಿ.ಕೆ. ಸ್ಕ್ರಾಪ್' ಗುಜಿರಿ ಅಂಗಡಿಯ ಗೋದಾಮಿನಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಸೊತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ಹರ್ಷಿತ್ (18), 34 ನೆಕ್ಕಿಲಾಡಿಯ ಆದರ್ಶನಗರದ ಸಿನಾನ್ (19) ಹಾಗೂ ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ಇಸ್ಮಾಯೀಲ್ ಜೆ. (18) ಬಂಧಿತ ಆರೋಪಿಗಳು. ಇವರಿಂದ ಸುಮಾರು 65 ಸಾವಿರ ರೂ. ಮೌಲ್ಯದ ಕಳವು ಮಾಡಿದ ಗುಜರಿ ಸಾಮಾನು ಹಾಗೂ ಸಾಗಾಟಕ್ಕೆ ಬಳಸಿದ ಸುಮಾರು 50 ಸಾವಿರ ರೂ. ಮೌಲ್ಯದ ಅಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story