ಬಂಟ್ವಾಳ : ಅಕ್ರಮ ಮರಳುಗಾರಿಕೆಗೆ ದಾಳಿ
ಬಂಟ್ವಾಳ, ಫೆ.12: ತಾಲೂಕಿನ ಕರಿಯಂಗಳದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬುಧವಾರ ದಾಳಿ ನಡೆಸಿದ ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಜಂಟಿ ತಂಡ ದೋಣಿ, ಲಾರಿ ಮತ್ತು ಹಿಟಾಚಿ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.
ಬಡಗಬೆಳ್ಳೂರಿನಲ್ಲಿ ಮರಳುಗಾರಿಕೆ ನಡೆಸಲು ವ್ಯಕ್ತಿಯೊಬ್ಬರಿಗೆ ಟೆಂಡರ್ ನೀಡಲಾಗಿದ್ದು ಆದರೆ ಆ ವ್ಯಕ್ತಿ ಕರಿಯಂಗಳದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ವೇಳೆ ಅಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದು ಒಟ್ಟು 11 ದೋಣಿಗಳು, 6 ಲಾರಿಗಳು ಹಾಗೂ ಒಂದು ಹಿಟಾಚಿ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಸೊತ್ತುಗಳನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯವರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.
Next Story