ಫೆ.19ರಂದು ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನಾ ಸಭೆ
ಕುಂದಾಪುರ, ಫೆ.18: ಸಿಎಎ ಮತ್ತು ಎನ್ಆರ್ಸಿ ವಿರೋಧಿ ಹೋರಾಟ ಸಮಿತಿ ಕುಂದಾಪುರ ಇದರ ನೇತೃತ್ವದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆಯನ್ನು ಫೆ.19ರಂದು ಮಧ್ಯಾಹ್ನ 3ಗಂಟೆಗೆ ನಾವುಂದ ವಿನಾಯಕ ಹೊಟೇಲ್ ಎದುರು ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಮೈಸೂರು ಶ್ರೀಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ್ ಮುರೊಳ್ಳಿ, ಯುವ ಚಿಂತಕಿ ಭವ್ಯ ನರಸಿಂಹಮೂರ್ತಿ, ವಾಗ್ಮಿ ನಜ್ಮಾ ನಝೀರ್ ಚಿಕ್ಕನೇರಳೆ, ಮಾನವ ಹಕ್ಕುಗಳ ಹೋರಾಟಗಾರ ಫಾ.ವಿಲಿಯಂ ಮಾರ್ಟಿಸ್, ಎಸ್ಸೆಸ್ಸೆಫ್ ಕರ್ನಾಟಕ ಕಾರ್ಯದರ್ಶಿ ಕೆ.ಪಿ.ಸಿರಾಜುದ್ದೀನ್ ಸಖಾಫಿ, ಮುಫ್ತಿ ಮುಅಝಮ್ ಮೌಲಾನ, ಮಂಜುನಾಥ ಹಳಗೇರಿ ಮೊದಲಾದವರು ಭಾಗವಹಿಸಲಿರುವರು.
ಅಧ್ಯಕ್ಷತೆಯನ್ನು ಹೋರಾಟ ಸಮಿತಿಯ ಅಧ್ಯಕ್ಷ ಶಶಿಧರ ಹೆಮ್ಮಾಡಿ ವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.
Next Story