ಉಡುಪಿ: ವಿಎಚ್ಪಿ ಜಿಲ್ಲಾ ಸಮಿತಿ ತಾತ್ಕಾಲಿಕ ಬರ್ಖಾಸ್ತು
ಉಡುಪಿ, ಫೆ.19: ಉಡುಪಿ ಜಿಲ್ಲೆಯ ವಿಶ್ವಹಿಂದೂ ಪರಿಷತ್ತನ್ನು ತಾತ್ಕಾಲಿಕ ವಾಗಿ ಬರ್ಖಾಸ್ತುಗೊಳಿಸಲಾಗಿದೆ ಎಂದು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಎಚ್ಪಿ ಉಡುಪಿ ಜಿಲ್ಲಾ ಸಮಿತಿಯನ್ನು ಇನ್ನಷ್ಟು ಸಕ್ರೀಯಗೊಳಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ವಿಸರ್ಜಿಸಲಾಗಿದೆ. ಮುಂದಿನ ಹೊಸ ಸಮಿತಿಯ ಘೋಷಣೆಯಾಗುವವರೆಗೆ ಜಿಲ್ಲಾ ಸಮಿತಿಯಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗ ದಳ, ಮಾತೃಶಕ್ತಿ, ದುರ್ಗಾವಾಹಿನಿಯ ಯಾರಿಗೂ ಯಾವುದೇ ಜವಾಬ್ದಾರಿ ಇರುವುದಿಲ್ಲ. ಆದರೆ ಇವುಗಳ ತಾಲೂಕು, ವಲಯ, ಗ್ರಾಮ ಮತ್ತು ಘಟಕ ಮಟ್ಟದ ಸಮಿತಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ವಿಎಚ್ಪಿ ಉಡುಪಿ ಜಿಲ್ಲಾ ಸಮಿತಿಯನ್ನು ಇನ್ನಷ್ಟು ಸಕ್ರೀಯಗೊಳಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ವಿಸರ್ಜಿಸಲಾಗಿದೆ. ಮುಂದಿನ ಹೊಸ ಸಮಿತಿಯ ಘೋಷಣೆಯಾಗುವವರೆಗೆ ಜಿಲ್ಲಾ ಸಮಿತಿಯಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗ ದಳ, ಮಾತೃಶಕ್ತಿ, ದುರ್ಗಾವಾಹಿನಿಯ ಯಾರಿಗೂ ಯಾವುದೇ ಜವಾಬ್ದಾರಿ ಇರುವುದಿಲ್ಲ. ಆದರೆ ಇವುಗಳ ತಾಲೂಕು, ವಲಯ, ಗ್ರಾಮ ಮತ್ತು ಘಟಕ ಮಟ್ಟದ ಸಮಿತಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬುಧವಾರ ಉಡುಪಿಯ ಸಂಘ ಕಾರ್ಯಾಲಯದಲ್ಲಿ ವಿಶ್ವಹಿಂದೂ ಪರಿಷತ್ತಿನ ಪ್ರಾಂತ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್ ಇವರ ಉಪಸ್ಥಿತಿ ಯಲ್ಲಿ ಈ ನಿರ್ಣಯ ಕೈಗೊಳಲಾಗಿದ್ದು, ಶೀಘ್ರವೇ ಹೊಸ ಜಿಲ್ಲಾ ಸಮಿತಿಯನ್ನು ಘೋಷಣೆ ಮಾಡಲಾಗುವುದು ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.