ವಾಹನ ಢಿಕ್ಕಿ: ಪಾದಚಾರಿ ಮೃತ್ಯು
ಕುಂದಾಪುರ, ಫೆ.19: ಕಂಡ್ಲೂರು ನ್ಯೂ ಬೆಂಗಳೂರು ಅಯ್ಯಂಗಾರ್ ಬೇಕರಿ ಬಳಿ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಫೆ.18ರಂದು ಮಧ್ಯಾಹ್ನ 3:30ರ ಸುಮಾರಿಗೆ ಕುಂದಾಪುರ ಕಡೆಯಿಂದ ಅಂಪಾರು ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವು ರಸ್ತೆ ದಾಟುತ್ತಿದ್ದ ಕಂಡ್ಲೂರು ನಿವಾಸಿ ಆತ್ಮಾರಾಮ ಉಪಾಧ್ಯ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಫೆ.19ರಂದು ಬೆಳಗ್ಗೆ 6:30ರ ಸುಮಾರಿಗೆ ಮೃತಪಟ್ಟರು.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story