ಹಿಂದಿನ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮುಂದುವರಿಕೆ: ಕೆ.ಪಿ.ಇಬ್ರಾಹಿಂ
ಉಡುಪಿ, ಫೆ.20: ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಆದೇಶದಂತೆ ಈ ಹಿಂದೆ 2018ರ ಮಾ.14ರಲ್ಲಿ ರಚನೆ ಮಾಡಿದ ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯು ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅ್ಯಕ್ಷ ಹಾಜಿ ಕೆ.ಪಿ.ಇಬ್ರಾಹಿಂ ತಿಳಿಸಿದ್ದಾರೆ.
21 ಮಂದಿಯ ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯು 2018ರ ಮಾ.14ರಂದು ಅಧಿಕಾರ ವಹಿಸಿಕೊಂಡಿದ್ದು ನಂತರದ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಈ ಹಿಂದೆ ರಚನೆಯಾದ ನಮ್ಮ ಸಮಿತಿಯ ಅಧಿಕಾರವನ್ನು ಹಿಂಪಡೆದು 2020ರ ಜ.21ರಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ರಾಜ್ಯ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಹೈಕೋರ್ಟ್ ಫೆ.13ರಂದು ಈ ಆದೇಶಕ್ಕೆ ಎರಡು ವಾರಗಳ ಕಾಲ ತಡೆ ಯಾಜ್ಞೆ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story