ಕುಂಬಳೆ: ಬಸ್ ಢಿಕ್ಕಿಯಾಗಿ ಮದ್ರಸ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು, ಫೆ.23: ಮದ್ರಸದಿಂದ ಮನೆಗೆ ಬರಲು ರಸ್ತೆ ದಾಟುತ್ತಿದ್ದ ಬಾಲಕಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟವಳನ್ನು ಅಲ್ಹಾನ್(8) ಎಂದು ಗುರುತಿಸಲಾಗಿದೆ. ಸಮೀಪದ ಮದ್ರಸದ ಎರಡನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅಲ್ಹಾನ್ ಇಂದು ಬೆಳಗ್ಗೆ ಮದ್ರಸ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಬಾಲಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂದ ಅಲ್ಹಾನ್ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದು, ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.
Next Story