ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಬೈಂದೂರು, ಫೆ.24: ಉಪ್ಪುಂದ ಗ್ರಾಮದ ವಿನಾಯಕ ಐಸ್ಕ್ರೀಮ್ ಅಂಗಡಿಯ ಎದುರು ಫೆ.24ರಂದು ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಉಪ್ಪುಂದ ನಿವಾಸಿ ಲಕ್ಷ್ಮೀ (60) ಎಂದು ಗುರುತಿಸಲಾಗಿದೆ.
ಇವರು ಕಾರಂತ ಕ್ಲಿನಿಕ್ಗೆ ಹೋಗಲು ರಸ್ತೆ ಬದಿ ನಿಂತುಕೊಂಡಿರುವಾಗ ಬೈಂದೂರು ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆ ನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story