ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು, ಫೆ.24: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಐಪಿಪಿಎಸ್, ಬ್ಯಾಂಕಿಂಗ್, ಎಸ್ಎಸ್ಸಿ ಹಾಗೂ ರೈಲ್ವೆ ಇಲಾಖೆಗಳು ನಡೆಸುವ ಪರೀಕ್ಷೆಗಳಿಗೆ ಸಿ.ಎಲ್. ಎಜುಕೇಟ್ ಲಿ. ಬೆಂಗಳೂರು ಇದರ ವತಿಯಿಂದ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ 18ರಿಂದ 35 ವರ್ಷ ಪ್ರಾಯದೊಳಗಿರುವ ಯಾವುದೇ ಪದವೀಧರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿ ಗಳು ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್ಗಳ ನಕಲು ಪ್ರತಿಗಳೊಂದಿಗೆ ಫೆ.27ರೊಳಗೆ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ, ಮನಪಾ ಕಟ್ಟಡ, ಲಾಲ್ಬಾಗ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ತರಬೇತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ/ಟಿಎ/ಡಿಎ ನೀಡಲಾಗುವುದಿಲ್ಲ. ಮಾಹಿತಿಗೆ (ಮೊ.ಸಂ: 9964322070/9663079943)ಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story